30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು.

224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಜುಲೈ 9 ರಂದು ನೂತನವಾಗಿ ಉದ್ಘಾಟನೆಗೊಂಡ ಸಂಘ 8 ತಿಂಗಳ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಸೇರಿರುವ ಸಭೆಯಲ್ಲಿ ಸವಿಸ್ತಾರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡೆಲ್ಸನ್ ಮೋನಿಸ್ ಮಂಡಿಸಿದರು. ಕಡಿಮೆ ಅವಧಿಯಲ್ಲಿ 28 ಕೋಟಿ ವ್ಯವಹಾರವನ್ನು ಮಾಡಿದ ಈ ಸಂಘದ ಅಭೂತಪೂರ್ವ ಕಾರ್ಯವೈಖರಿಯನ್ನು ಸೇರಿರುವ ಎಲ್ಲಾ ಸದಸ್ಯರು ಪ್ರಶಂಸಿದರು. ಮುಖ್ಯ ಸಲಹೆಗಾರರಾದ ಸಹಕಾರಿ ಧುರೀಣ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ಕಾರ್ಯ ವೈಖರಿಯನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಹಾಸಭೆಯಲ್ಲಿ ಕೆಲವೊಂದು ಅತ್ಯಮೂಲ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭಾಧ್ಯಕ್ಷ ಸ್ಥಾನದಿಂದ ಜಯಂತ ಶೆಟ್ಟಿಯವರು ಸಮಯೋಚಿತವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಸಂಘದ ಎಲ್ಲಾ ನಿರ್ದೇಶಕರು ಮುಖ್ಯ ಸಲಹೆಗಾರರು ಗೌರವ ಸಲಹೆಗಾರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.ನಿರ್ದೇಶಕರಾದ ಉದಯ್ ಕುಮಾರ್ ಜೈನ್ ಸ್ವಾಗತಿಸಿ ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ ವಂದಿಸಿದರು. ನಿರ್ದೇಶಕ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!