September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು.

224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಜುಲೈ 9 ರಂದು ನೂತನವಾಗಿ ಉದ್ಘಾಟನೆಗೊಂಡ ಸಂಘ 8 ತಿಂಗಳ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಸೇರಿರುವ ಸಭೆಯಲ್ಲಿ ಸವಿಸ್ತಾರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡೆಲ್ಸನ್ ಮೋನಿಸ್ ಮಂಡಿಸಿದರು. ಕಡಿಮೆ ಅವಧಿಯಲ್ಲಿ 28 ಕೋಟಿ ವ್ಯವಹಾರವನ್ನು ಮಾಡಿದ ಈ ಸಂಘದ ಅಭೂತಪೂರ್ವ ಕಾರ್ಯವೈಖರಿಯನ್ನು ಸೇರಿರುವ ಎಲ್ಲಾ ಸದಸ್ಯರು ಪ್ರಶಂಸಿದರು. ಮುಖ್ಯ ಸಲಹೆಗಾರರಾದ ಸಹಕಾರಿ ಧುರೀಣ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ಕಾರ್ಯ ವೈಖರಿಯನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಹಾಸಭೆಯಲ್ಲಿ ಕೆಲವೊಂದು ಅತ್ಯಮೂಲ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭಾಧ್ಯಕ್ಷ ಸ್ಥಾನದಿಂದ ಜಯಂತ ಶೆಟ್ಟಿಯವರು ಸಮಯೋಚಿತವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಸಂಘದ ಎಲ್ಲಾ ನಿರ್ದೇಶಕರು ಮುಖ್ಯ ಸಲಹೆಗಾರರು ಗೌರವ ಸಲಹೆಗಾರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.ನಿರ್ದೇಶಕರಾದ ಉದಯ್ ಕುಮಾರ್ ಜೈನ್ ಸ್ವಾಗತಿಸಿ ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ ವಂದಿಸಿದರು. ನಿರ್ದೇಶಕ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!