July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!