25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!