September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!