22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!