23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!