23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya
error: Content is protected !!