23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!