September 6, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಥಮ್ ವಿ. ಶೆಟ್ಟಿಗೆ ಬೆಳ್ಳಿ ಪದಕ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya
error: Content is protected !!