ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a Comment

error: Content is protected !!