September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
error: Content is protected !!