September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ ಗೌಡ ಮಾತನಾಡಿ ಸಂಘಟನೆಗಳು ನಿಂತ ನೀರಾಗದೆ, ಹರಿಯುವ ನೀರಾಗಬೇಕು. ನಮ್ಮ ಸಮಾಜದ ಕೊನೆಯ ವ್ಯಕ್ತಿಗೂ ಕೂಡ ಸಹಾಯವಾಗಬೇಕು. ಈ ಟ್ರಸ್ಟ್ ಬೆಳಗಲಿ ಎಂದು ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮ0ಜ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸದಸ್ಯತ್ವದ ಅರ್ಜಿ ನಮೂನೆ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ತಾಲೂಕು ಸಮಿತಿ ಕಾರ್ಯದರ್ಶಿ ಭರತ್ ಕುಮಾರ್ ಬಂಗಾಡಿ, ಕಾರ್ಯಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ್ ಗೌಡ ಗುರಿಪಳ್ಳ, ಸೂರಜ್ ಕುಮಾರ್ ಒಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ವಿಜಯ ಗೌಡ ಮತ್ತು ರಂಜನ್‌ ಜಿ.ಗೌಡ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ಟ್ರಸ್ಟಿನ ಸದಸ್ಯ ವಿದ್ಯಾಶ್ರೀನಿವಾಸ್ ಗೌಡ ಪ್ರಾರ್ಥಿಸಿದರು. ಸ್ಥಾಪಕ ಟ್ರಸ್ಟಿಗಳಾದ ವಸಂತ ಮರಕಡ ಸ್ವಾಗತಿಸಿದರು. ನವೀನ್ ಬಿ.ಕೆ. ನಿರೂಪಿಸಿದರು. ಸೂರಜ್ ವಳಂಬ್ರ ಧನ್ಯವಾದವಿತ್ತರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
error: Content is protected !!