September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು.

224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಜುಲೈ 9 ರಂದು ನೂತನವಾಗಿ ಉದ್ಘಾಟನೆಗೊಂಡ ಸಂಘ 8 ತಿಂಗಳ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಸೇರಿರುವ ಸಭೆಯಲ್ಲಿ ಸವಿಸ್ತಾರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡೆಲ್ಸನ್ ಮೋನಿಸ್ ಮಂಡಿಸಿದರು. ಕಡಿಮೆ ಅವಧಿಯಲ್ಲಿ 28 ಕೋಟಿ ವ್ಯವಹಾರವನ್ನು ಮಾಡಿದ ಈ ಸಂಘದ ಅಭೂತಪೂರ್ವ ಕಾರ್ಯವೈಖರಿಯನ್ನು ಸೇರಿರುವ ಎಲ್ಲಾ ಸದಸ್ಯರು ಪ್ರಶಂಸಿದರು. ಮುಖ್ಯ ಸಲಹೆಗಾರರಾದ ಸಹಕಾರಿ ಧುರೀಣ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ಕಾರ್ಯ ವೈಖರಿಯನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಹಾಸಭೆಯಲ್ಲಿ ಕೆಲವೊಂದು ಅತ್ಯಮೂಲ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭಾಧ್ಯಕ್ಷ ಸ್ಥಾನದಿಂದ ಜಯಂತ ಶೆಟ್ಟಿಯವರು ಸಮಯೋಚಿತವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಸಂಘದ ಎಲ್ಲಾ ನಿರ್ದೇಶಕರು ಮುಖ್ಯ ಸಲಹೆಗಾರರು ಗೌರವ ಸಲಹೆಗಾರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.ನಿರ್ದೇಶಕರಾದ ಉದಯ್ ಕುಮಾರ್ ಜೈನ್ ಸ್ವಾಗತಿಸಿ ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ ವಂದಿಸಿದರು. ನಿರ್ದೇಶಕ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!