23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

ಅಳದಂಗಡಿ: ವರದಿ ಸಾಲಿನಲ್ಲಿ ಸಂಘವು ರೂ 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.1.54ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಹೇಳಿದರು.

ಅವರು ಅಳದಂಗಡಿ ಶ್ರೀಗುರು ಸಭಾಭವನದಲ್ಲಿ ನಡೆದ ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ಮತ್ತು ಕೃಷಿಯೇತರ ಸಾಲಗಳ ಬೇಡಿಕೆಗೆ ನಿರಂತರವಾಗಿ ಸ್ಪಂದನೆ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ, ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಕೊರಗಪ್ಪ, ಸುಂದರಿ ,ಮಮತಾ, ಧರ್ಣಪ್ಪ, ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾರವರು 2023-24 ನೇ ಸಾಲಿನ ವಾರ್ಷಿಕ ವರದಿ ಜಮಾ ಖರ್ಚು ಹಾಗೂ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ‌ಕೆ, ದೇಜಪ್ಪ ಪೂಜಾರಿ ಹಾಗೂ ಮಾಜಿ ಅಧ್ಯಕ್ಷರುಗಳು, ರೈತ ಸದಸ್ಯರು ಉಪಸ್ಥಿತರಿದ್ದರು.

ಸಂಘದ ನೌಕರರ ವೃಂದ ಸತೀಶ್ ಕೆ,ಪ್ರಶಾಂತ್ ಎಸ್,ಭರತ್ ರಾಜ್,ಜಗದೀಶ್ ಶೆಟ್ಟಿ ಎನ್,ಮಮತಾ,ಸಂತೋಷ್ ಎ,ಹರೀಶ್ ನಾಯ್ಕ,ಯತೀಶ್, ದಿನೇಶ್, ಪ್ರವೀಣ, ಶ್ರೀದೇವಿ, ಸುಮಲತಾ, ಕಿರಣ್, ಡೀಕಯ್ಯ, ಜಯಾನಂದ ಹಾಗೂ ಪಿಗ್ಮಿ ಸಂಗ್ರಾಹಕರು ಸಹಕರಿಸಿದರು.

Related posts

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya
error: Content is protected !!