28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.22 ರಂದು ಸಂಘದ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷತೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.

2023-24 ನೇ ಸಾಲಿನ ಒಟ್ಟು ವ್ಯವಹಾರ ರೂ. 2,44,03937.12, ಲಾಭ ರೂ. 61,7967.51 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಬೋನಸ್ ನೀಡಲಾಯಿತು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ದ.ಕ ಸಹಾಯಕ ವ್ಯವಸ್ಥಾಪಕರು ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಡಾ. ಗಣಪತಿ ಬಿ. ಎಮ್ ಜಾನುವಾರುಗಳ ಬಗ್ಗೆ ಮಾಹಿತಿ ನೀಡಿದರು . ಸಂಘಕ್ಕೆ ಹೆಚ್ಚು ಹಾಲು ಹಾಕಿದ ಜೊಹರಾಬಿ, ಸುಮಾ ಬಿ ಎಸ್, ಲಕ್ಷ್ಮಿ ಗೌರವಿಸಲಾಯಿತು.
ಎಸ್ ಎಸ್ ಎಲ್ ಸಿ ಮತ್ತು ಪಿಯು ಸಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ವಿದ್ಯಾರ್ಥಿಗಳಿಗೆ ಒಟ್ಟು 6 ಮಂದಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಕ್ರೀಡೆಯಲ್ಲಿ ಸಾಧನೆ ಮಾಡಿದ ಯೂನಿತ್ ಹಾಗೂ ಕರಾಟೆಯಲ್ಲಿ ಸಾಧನೆ ಮಾಡಿದ ಮೊಹಮ್ಮದ್ ಇಲ್ತಿಯಾಜ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ , ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಜಾನಕಿ.ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ದಿಶಾ ಪ್ರಾರ್ಥಸಿ, ಸಂಘದ ನಿರ್ದೇಶಕರಾದ ಜಾನಕಿ ಕಾರ್ಯಕ್ರಮ ನಿರೂಪಿಸಿ, ಚೈತ್ರ ಯ0.ಜಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ