July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.


ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ ಹಕ್ಕು ಪತ್ರ ಲಭಿಸಿರಲಿಲ್ಲ. ಸದ್ರಿ ಸರ್ವೆ ನಂಬರ್ ನಲ್ಲಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕಿಸದ ಕಾರಣದಿಂದಾಗಿ ಹಕ್ಕುಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ 309ಸರ್ವೆ ನಂಬರ್ ನಲ್ಲಿ ಇರುವ ಜಮೀನಿನ ಜಂಟಿ ಸರ್ವೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಕೊಡುವಂತೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಹಕ್ಕುಪತ್ರ ಲಭಿಸಲು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಅರಣ್ಯ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಅಧಿಕಾರಿಗಳು ಸಾಧ್ಯವಾದಷ್ಟು ವೇಗವಾಗಿ ಸರ್ವೆ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ, ಕೇಂದ್ರ ಸಮಿತಿ ಸದಸ್ಯ ಜಾರ್ಜ್, ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷ ಜೈಸನ್ ಪಟ್ಟೇರಿ, ಮುಖಂಡ ಜೋಮೆಟ್ ಕಳೆಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya
error: Content is protected !!