23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಬೆಳ್ತಂಗಡಿ (ಸೆ-24): ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್
ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು.

ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ, ಉದಯನಗರ, ಸುದೆ ಮುಗೇರು, ಸಂತೆಕಟ್ಟೆ, ರೆಂಕೆದಗುತ್ತು, ಮುಗುಳಿ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ವಯೋವೃದ್ಧರು, ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಬೀದಿ ನಾಯಿಗಳ ಉಪಟಳ ಹೇಳ ತೀರದು. ಅದರಲ್ಲೂ ಬೈಕ್ ಸವಾರರನ್ನು ಈ ನಾಯಿಗಳು ಅಟ್ಟಿಸಿಕೊಂಡು ಹೋಗಿ ಭಯ ಹುಟ್ಟಿಸುವುದಲ್ಲದೆ ಕಚ್ಚುತ್ತವೆ. ಭಯಗೊಂಡ ಅನೇಕರು ಅಪಘಾತಕ್ಕೂ ಒಳಗಾಗಿದ್ದಾರೆ.

ಪ್ರತಿ ವರ್ಷ ಪಂಚಾಯತ್ ವತಿಯಿಂದಲೇ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಚಿಕಿತ್ಸೆ ಮಾಡದಿರುವುದರಿಂದ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಮಕ್ಕಳಿಗೂ ಬೀದಿನಾಯಿ ಕಚ್ಚಿವೆ. ಆದ್ದರಿಂದ ಪಂಚಾಯತ್ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರ ಪ್ರಾಣ ರಕ್ಷಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸಫ್ರಾ, ಮುಮ್ತಾಝ್, ರುಬಿಯಾ, ಸಫೀದಾ ಉಪಸ್ಥಿತರಿದ್ದರು.

Related posts

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya
error: Content is protected !!