ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಬೆಳ್ತಂಗಡಿ (ಸೆ-24): ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್
ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು.

ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ, ಉದಯನಗರ, ಸುದೆ ಮುಗೇರು, ಸಂತೆಕಟ್ಟೆ, ರೆಂಕೆದಗುತ್ತು, ಮುಗುಳಿ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ವಯೋವೃದ್ಧರು, ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಬೀದಿ ನಾಯಿಗಳ ಉಪಟಳ ಹೇಳ ತೀರದು. ಅದರಲ್ಲೂ ಬೈಕ್ ಸವಾರರನ್ನು ಈ ನಾಯಿಗಳು ಅಟ್ಟಿಸಿಕೊಂಡು ಹೋಗಿ ಭಯ ಹುಟ್ಟಿಸುವುದಲ್ಲದೆ ಕಚ್ಚುತ್ತವೆ. ಭಯಗೊಂಡ ಅನೇಕರು ಅಪಘಾತಕ್ಕೂ ಒಳಗಾಗಿದ್ದಾರೆ.

ಪ್ರತಿ ವರ್ಷ ಪಂಚಾಯತ್ ವತಿಯಿಂದಲೇ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಚಿಕಿತ್ಸೆ ಮಾಡದಿರುವುದರಿಂದ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಮಕ್ಕಳಿಗೂ ಬೀದಿನಾಯಿ ಕಚ್ಚಿವೆ. ಆದ್ದರಿಂದ ಪಂಚಾಯತ್ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರ ಪ್ರಾಣ ರಕ್ಷಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸಫ್ರಾ, ಮುಮ್ತಾಝ್, ರುಬಿಯಾ, ಸಫೀದಾ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya
error: Content is protected !!