25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಬೆಳ್ತಂಗಡಿ (ಸೆ-24): ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್
ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು.

ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ, ಉದಯನಗರ, ಸುದೆ ಮುಗೇರು, ಸಂತೆಕಟ್ಟೆ, ರೆಂಕೆದಗುತ್ತು, ಮುಗುಳಿ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ವಯೋವೃದ್ಧರು, ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಬೀದಿ ನಾಯಿಗಳ ಉಪಟಳ ಹೇಳ ತೀರದು. ಅದರಲ್ಲೂ ಬೈಕ್ ಸವಾರರನ್ನು ಈ ನಾಯಿಗಳು ಅಟ್ಟಿಸಿಕೊಂಡು ಹೋಗಿ ಭಯ ಹುಟ್ಟಿಸುವುದಲ್ಲದೆ ಕಚ್ಚುತ್ತವೆ. ಭಯಗೊಂಡ ಅನೇಕರು ಅಪಘಾತಕ್ಕೂ ಒಳಗಾಗಿದ್ದಾರೆ.

ಪ್ರತಿ ವರ್ಷ ಪಂಚಾಯತ್ ವತಿಯಿಂದಲೇ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಚಿಕಿತ್ಸೆ ಮಾಡದಿರುವುದರಿಂದ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಮಕ್ಕಳಿಗೂ ಬೀದಿನಾಯಿ ಕಚ್ಚಿವೆ. ಆದ್ದರಿಂದ ಪಂಚಾಯತ್ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರ ಪ್ರಾಣ ರಕ್ಷಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸಫ್ರಾ, ಮುಮ್ತಾಝ್, ರುಬಿಯಾ, ಸಫೀದಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!