23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ, ರಾಜ್ಯಪಾಲರ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ಅತಂತ್ರವಾದಂತಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾ|ಎಂ.ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠವು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದೆ.

Related posts

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!