25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಐಟಿಐಗೆ ಶೇ. 100 ಫಲಿತಾಂಶ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಗೆ ಆಗಸ್ಟ್ 2024ರಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದೊರೆತಿದೆ.

ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಮೋಟಾರ್ ವಾಹನ, ರೆಫ್ರಿಜರೇಟರ್ ಎಸಿ ಟೆಕ್ನಿಷಿಯನ್ ವೃತ್ತಿಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಶೇಕಡ 100 ಫಲಿತಾಂಶ ದೊರೆತಿದೆ. ಒಂದು ವರ್ಷದ ವೃತ್ತಿ ಘಟಕಗಳಾದ ಮೆಕ್ಯಾನಿಕ್ ಡೀಸೆಲ್ ವೃತ್ತಿಯಲ್ಲಿ ಶೇಕಡ 98, ವೆಲ್ಡರ್ ವೃತ್ತಿಯಲ್ಲಿ ಶೇಕಡ 92 ಫಲಿತಾಂಶ ಬಂದಿದ್ದು ಒಟ್ಟು 314 ಅಭ್ಯರ್ಥಿಗಳಲ್ಲಿ 310 ಮಂದಿ ತೇರ್ಗಡೆ ಹೊಂದಿರುತ್ತಾರೆ.

ಈಗಾಗಲೇ ಕ್ಯಾಂಪಸ್ ನ ಮೂಲಕ ವಿವಿಧ ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಗೊಂಡಿರುವ ಈ ಎಲ್ಲಾ ವಿದ್ಯಾರ್ಥಿಗಳು ಕಂಪನಿಗಳಲ್ಲಿ ತಮ್ಮ ವೃತ್ತಿ ಬದುಕನ್ನು ಪ್ರಾರಂಭಿಸಿರುತ್ತಾರೆ. ಸಂಸ್ಥೆಯ ಉತ್ತಮ ಫಲಿತಾಂಶಕ್ಕಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಇವರು ಸಿಬ್ಬಂದಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ ಎಂದು ಸಂಸ್ಥೆಯ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!