ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಕೊಯ್ಯೂರು :ಸ್ವಚ್ಛತಾ ಕೀ ಸೇವಾ ಆಂದೋಲನ
ಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕೊಯ್ಯೂರು ಕಾಲೇಜ್ ಬಳಿಯಿಂದ ಗ್ರಾಮಪಂಚಾಯತ್ ತನಕ ಮುಖ್ಯ ಮಾರ್ಗದ ಇಕ್ಕೆಲ ಗಳಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛ ಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ,ಉಪಾಧ್ಯಕ್ಷರಾದ ಶ್ರೀ ಹರೀಶ್ ಗೌಡ,ಕಾಲೇಜು ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರಕಾಶ್, ಕಾಲೇಜು ಉಪನ್ಯಾಸಕ ವೃಂದ, ಸ್ವಚ್ಛತಾ ಘಟಕದ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

Leave a Comment

error: Content is protected !!