25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!