ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.


ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ ಹಕ್ಕು ಪತ್ರ ಲಭಿಸಿರಲಿಲ್ಲ. ಸದ್ರಿ ಸರ್ವೆ ನಂಬರ್ ನಲ್ಲಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕಿಸದ ಕಾರಣದಿಂದಾಗಿ ಹಕ್ಕುಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ 309ಸರ್ವೆ ನಂಬರ್ ನಲ್ಲಿ ಇರುವ ಜಮೀನಿನ ಜಂಟಿ ಸರ್ವೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಕೊಡುವಂತೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಹಕ್ಕುಪತ್ರ ಲಭಿಸಲು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಅರಣ್ಯ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಅಧಿಕಾರಿಗಳು ಸಾಧ್ಯವಾದಷ್ಟು ವೇಗವಾಗಿ ಸರ್ವೆ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ, ಕೇಂದ್ರ ಸಮಿತಿ ಸದಸ್ಯ ಜಾರ್ಜ್, ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷ ಜೈಸನ್ ಪಟ್ಟೇರಿ, ಮುಖಂಡ ಜೋಮೆಟ್ ಕಳೆಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya
error: Content is protected !!