26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

ನಿಡ್ಲೆ: ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯು ಸೆ.22 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಶಾಲಾ ಅಮೃತ ಮಹೋತ್ಸವವನ್ನು ಡಿಸೆಂಬರ್ 27 ಹಾಗೂ 28ರಂದು ನಡೆಸುವುದಾಗಿ ತೀರ್ಮಾನಿಸಲಾಯಿತು. ಈ ವೇಳೆ ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರೂ. 1 ಲಕ್ಷ ನೀಡಿ ಸಹಕರಿಸಿದರು. ಅಮೃತ ಮಹೋತ್ಸವದ ಒಂದು ದಿನದ ಊಟದ ವ್ಯವಸ್ಥೆಯನ್ನು ಊರಿನ ಹಿರಿಯರಾದ ಹೊನ್ನಪ್ಪ ಗೌಡ ಮೇರ್ಲ ಇವರು ನೀಡುವ ಭರವಸೆಯನ್ನು ನೀಡಿದರು. ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ವೇದಿಕೆಯಲ್ಲಿ ಅಮೃತ ಮಹೋತ್ಸವ ಸಮಿತಿಯ ಶಿವರಾಮ್ ರಾವ್ ಕೊಡಂಗೆ ಉದ್ಯಮಿಗಳು ಬೆಂಗಳೂರು, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಶಾಲಾ ಮುಖ್ಯೋಪಾಧ್ಯಾಯ ಗೋಪಾಲ್, ಎಸ್ ಡಿ ಎಮ್ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ , ಅಮೃತ ಮಹೋತ್ಸವದ ಕೋಶಾಧಿಕಾರಿ ಕೃಷ್ಣ ಕುಮಾರ್ ಕಾಟ್ಲ, ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಹೇಮಂತ ಗೌಡ ಕಜೆ, ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇದರ ಅಧ್ಯಕ್ಷ ಪುನೀತ್ ಕುಮಾರ್, ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು, ಹಳೆ ವಿದ್ಯಾರ್ಥಿಗಳು, ವಿವಿಧ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
error: Content is protected !!