27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

ನಿಡ್ಲೆ: ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯು ಸೆ.22 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಶಾಲಾ ಅಮೃತ ಮಹೋತ್ಸವವನ್ನು ಡಿಸೆಂಬರ್ 27 ಹಾಗೂ 28ರಂದು ನಡೆಸುವುದಾಗಿ ತೀರ್ಮಾನಿಸಲಾಯಿತು. ಈ ವೇಳೆ ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರೂ. 1 ಲಕ್ಷ ನೀಡಿ ಸಹಕರಿಸಿದರು. ಅಮೃತ ಮಹೋತ್ಸವದ ಒಂದು ದಿನದ ಊಟದ ವ್ಯವಸ್ಥೆಯನ್ನು ಊರಿನ ಹಿರಿಯರಾದ ಹೊನ್ನಪ್ಪ ಗೌಡ ಮೇರ್ಲ ಇವರು ನೀಡುವ ಭರವಸೆಯನ್ನು ನೀಡಿದರು. ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ವೇದಿಕೆಯಲ್ಲಿ ಅಮೃತ ಮಹೋತ್ಸವ ಸಮಿತಿಯ ಶಿವರಾಮ್ ರಾವ್ ಕೊಡಂಗೆ ಉದ್ಯಮಿಗಳು ಬೆಂಗಳೂರು, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಶಾಲಾ ಮುಖ್ಯೋಪಾಧ್ಯಾಯ ಗೋಪಾಲ್, ಎಸ್ ಡಿ ಎಮ್ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ , ಅಮೃತ ಮಹೋತ್ಸವದ ಕೋಶಾಧಿಕಾರಿ ಕೃಷ್ಣ ಕುಮಾರ್ ಕಾಟ್ಲ, ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಹೇಮಂತ ಗೌಡ ಕಜೆ, ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇದರ ಅಧ್ಯಕ್ಷ ಪುನೀತ್ ಕುಮಾರ್, ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು, ಹಳೆ ವಿದ್ಯಾರ್ಥಿಗಳು, ವಿವಿಧ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya
error: Content is protected !!