34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಐಟಿಐಗೆ ಶೇ. 100 ಫಲಿತಾಂಶ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಗೆ ಆಗಸ್ಟ್ 2024ರಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದೊರೆತಿದೆ.

ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಮೋಟಾರ್ ವಾಹನ, ರೆಫ್ರಿಜರೇಟರ್ ಎಸಿ ಟೆಕ್ನಿಷಿಯನ್ ವೃತ್ತಿಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಶೇಕಡ 100 ಫಲಿತಾಂಶ ದೊರೆತಿದೆ. ಒಂದು ವರ್ಷದ ವೃತ್ತಿ ಘಟಕಗಳಾದ ಮೆಕ್ಯಾನಿಕ್ ಡೀಸೆಲ್ ವೃತ್ತಿಯಲ್ಲಿ ಶೇಕಡ 98, ವೆಲ್ಡರ್ ವೃತ್ತಿಯಲ್ಲಿ ಶೇಕಡ 92 ಫಲಿತಾಂಶ ಬಂದಿದ್ದು ಒಟ್ಟು 314 ಅಭ್ಯರ್ಥಿಗಳಲ್ಲಿ 310 ಮಂದಿ ತೇರ್ಗಡೆ ಹೊಂದಿರುತ್ತಾರೆ.

ಈಗಾಗಲೇ ಕ್ಯಾಂಪಸ್ ನ ಮೂಲಕ ವಿವಿಧ ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಗೊಂಡಿರುವ ಈ ಎಲ್ಲಾ ವಿದ್ಯಾರ್ಥಿಗಳು ಕಂಪನಿಗಳಲ್ಲಿ ತಮ್ಮ ವೃತ್ತಿ ಬದುಕನ್ನು ಪ್ರಾರಂಭಿಸಿರುತ್ತಾರೆ. ಸಂಸ್ಥೆಯ ಉತ್ತಮ ಫಲಿತಾಂಶಕ್ಕಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಇವರು ಸಿಬ್ಬಂದಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ ಎಂದು ಸಂಸ್ಥೆಯ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya
error: Content is protected !!