July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಐಟಿಐಗೆ ಶೇ. 100 ಫಲಿತಾಂಶ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಗೆ ಆಗಸ್ಟ್ 2024ರಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದೊರೆತಿದೆ.

ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಮೋಟಾರ್ ವಾಹನ, ರೆಫ್ರಿಜರೇಟರ್ ಎಸಿ ಟೆಕ್ನಿಷಿಯನ್ ವೃತ್ತಿಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಶೇಕಡ 100 ಫಲಿತಾಂಶ ದೊರೆತಿದೆ. ಒಂದು ವರ್ಷದ ವೃತ್ತಿ ಘಟಕಗಳಾದ ಮೆಕ್ಯಾನಿಕ್ ಡೀಸೆಲ್ ವೃತ್ತಿಯಲ್ಲಿ ಶೇಕಡ 98, ವೆಲ್ಡರ್ ವೃತ್ತಿಯಲ್ಲಿ ಶೇಕಡ 92 ಫಲಿತಾಂಶ ಬಂದಿದ್ದು ಒಟ್ಟು 314 ಅಭ್ಯರ್ಥಿಗಳಲ್ಲಿ 310 ಮಂದಿ ತೇರ್ಗಡೆ ಹೊಂದಿರುತ್ತಾರೆ.

ಈಗಾಗಲೇ ಕ್ಯಾಂಪಸ್ ನ ಮೂಲಕ ವಿವಿಧ ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಗೊಂಡಿರುವ ಈ ಎಲ್ಲಾ ವಿದ್ಯಾರ್ಥಿಗಳು ಕಂಪನಿಗಳಲ್ಲಿ ತಮ್ಮ ವೃತ್ತಿ ಬದುಕನ್ನು ಪ್ರಾರಂಭಿಸಿರುತ್ತಾರೆ. ಸಂಸ್ಥೆಯ ಉತ್ತಮ ಫಲಿತಾಂಶಕ್ಕಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಇವರು ಸಿಬ್ಬಂದಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ ಎಂದು ಸಂಸ್ಥೆಯ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya
error: Content is protected !!