30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿಯ ನವೋದಯ ಸಭಾ ಭವನದಲ್ಲಿ ಸೆ.24 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ರೂ.172 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ 87 ಲಕ್ಷ ಲಾಭ ಗಳಿಸಿದೆ, ಸದಸ್ಯರಿಗೆ ಶೇ.4% ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ತಿಳಿಸಿದರು.

ವರದಿ ವರ್ಷದಲ್ಲಿ ಸಂಘದ ಪ್ರಧಾನ ಕಚೇರಿಯಲ್ಲಿ ರೂ.169.42ಕೋಟಿ ವಾರ್ಷಿಕ ವ್ಯವಹಾರ ಹಾಗೂ ನಡಿಬೆಟ್ಟು ಶಾಖೆಯಲ್ಲಿ ರೂ.90.77ಲಕ್ಷ ವ್ಯವಹಾರ ಮಾಡಲಾಗಿದೆ ಎಂದರು.
ಸಂಘದ ಪ್ರಗತಿಗೆ ರೈತ ಸದಸ್ಯರು ಚರ್ಚಿಸಿದರು.

ವೇದಿಕೆಯಲ್ಲಿ ನಿರ್ದೇಶಕ ಕೆ. ನಾರಾಯಣ ರಾವ್,ಆನಂದ ಸಾಲಿಯಾನ್, ಸುಮಿತ್ರ ಬಿ ಹೆಗ್ಡೆ, ಮಲ್ಲಿಕಾ ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್, ಶೀನಪ್ಪ ಎಂ, ಸುಧೀರ್, ಪಿ.ಯಚ್ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಆಡಳಿತ ವರದಿ ಮಂಡಿಸಿದರು. ಸಿಬ್ಬಂದಿ ಶಶಿಕಲಾ ಪ್ರಾರ್ಥನೆ ಹಾಡಿದರು.ನಾರಾಯಣ ರಾವ್ ಸ್ವಾಗತಿಸಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರನಾಥ ಗೌಡ, ನಿರ್ದೇಶಕಿ ಸುಶೀಲಾ ಹಾಗೂ ಮಾಜಿ ಅಧ್ಯಕ್ಷರು, ರೈತ ಸದಸ್ಯರು ಉಪಸ್ಥಿತರಿದ್ದರು. ಸಹ ವ್ಯವಸ್ಥಾಪಕ ಎನ್.ಪ್ರಭಾಕರ, ಶಾಖಾ ವ್ಯವಸ್ಥಾಪಕ ರಮೇಶ್,ಲೆಕ್ಕಿಗ ರಾಜೇಶ್ ಎನ್, ಗುಮಾಸ್ತ ಮೋಹನ ಗೌಡ, ಜವಾನ ಶುಭಕರ ಸಹಕರಿಸಿದರು.

Related posts

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!