23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿಯ ನವೋದಯ ಸಭಾ ಭವನದಲ್ಲಿ ಸೆ.24 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ರೂ.172 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ 87 ಲಕ್ಷ ಲಾಭ ಗಳಿಸಿದೆ, ಸದಸ್ಯರಿಗೆ ಶೇ.4% ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ತಿಳಿಸಿದರು.

ವರದಿ ವರ್ಷದಲ್ಲಿ ಸಂಘದ ಪ್ರಧಾನ ಕಚೇರಿಯಲ್ಲಿ ರೂ.169.42ಕೋಟಿ ವಾರ್ಷಿಕ ವ್ಯವಹಾರ ಹಾಗೂ ನಡಿಬೆಟ್ಟು ಶಾಖೆಯಲ್ಲಿ ರೂ.90.77ಲಕ್ಷ ವ್ಯವಹಾರ ಮಾಡಲಾಗಿದೆ ಎಂದರು.
ಸಂಘದ ಪ್ರಗತಿಗೆ ರೈತ ಸದಸ್ಯರು ಚರ್ಚಿಸಿದರು.

ವೇದಿಕೆಯಲ್ಲಿ ನಿರ್ದೇಶಕ ಕೆ. ನಾರಾಯಣ ರಾವ್,ಆನಂದ ಸಾಲಿಯಾನ್, ಸುಮಿತ್ರ ಬಿ ಹೆಗ್ಡೆ, ಮಲ್ಲಿಕಾ ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್, ಶೀನಪ್ಪ ಎಂ, ಸುಧೀರ್, ಪಿ.ಯಚ್ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಆಡಳಿತ ವರದಿ ಮಂಡಿಸಿದರು. ಸಿಬ್ಬಂದಿ ಶಶಿಕಲಾ ಪ್ರಾರ್ಥನೆ ಹಾಡಿದರು.ನಾರಾಯಣ ರಾವ್ ಸ್ವಾಗತಿಸಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರನಾಥ ಗೌಡ, ನಿರ್ದೇಶಕಿ ಸುಶೀಲಾ ಹಾಗೂ ಮಾಜಿ ಅಧ್ಯಕ್ಷರು, ರೈತ ಸದಸ್ಯರು ಉಪಸ್ಥಿತರಿದ್ದರು. ಸಹ ವ್ಯವಸ್ಥಾಪಕ ಎನ್.ಪ್ರಭಾಕರ, ಶಾಖಾ ವ್ಯವಸ್ಥಾಪಕ ರಮೇಶ್,ಲೆಕ್ಕಿಗ ರಾಜೇಶ್ ಎನ್, ಗುಮಾಸ್ತ ಮೋಹನ ಗೌಡ, ಜವಾನ ಶುಭಕರ ಸಹಕರಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!