September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ನಮ್ಮೂರ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ)ರವರಿಗೆ ನಾಗರಿಕ ಅಭಿನಂದನಾ ಸಮಿತಿಯಿಂದ ಅ.2ರಂದು ಬೆಳಿಗ್ಗೆ 10 ಗಂಟೆಗೆ ಕುವೆಟ್ಟು ಹಾಗೂ ಓಡಿಲ್ನಾಳ ಗ್ರಾಮದ 35 ಸಂಘ ಸಂಸ್ಥೆಗಳು ಒಟ್ಟು ಸೇರಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷರು, ನಾಗರಿಕ ಅಭಿನಂದನಾ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ರವರು ಹೇಳಿದರು.

ಅವರು ಸೆ.24 ರಂದು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನೂ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ವಹಿಸಲಿದ್ದು, ಅಂಕಣಕಾರರಾದ ಆದರ್ಶ್ ಗೋಖಲೆ ಅಭಿನಂದನಾ ಭಾಷಣವನ್ನು ಮಾಡಲಿದ್ದಾರೆ . ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಿನ್ನಿಗೋಳಿಯ ವರೆಗೆ ಯೋಧರರಾದ ಮಂಜುನಾಥ್ ರವರನ್ನು ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಿದೆ. ವಿ.ಕೆ. ವಿಟ್ಲ ರವರನ್ನು ಗುರುವಾಯನಕೆರೆಯಲ್ಲಿ ಸ್ವಾಗತಿಸಿಲಿದೆ. 10ಗಂಟೆಗೆ ಮದ್ದಡ್ಕ-ಕಿನ್ನಿಗೋಳಿಯಿಂದ ಭವ್ಯ ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ “ಸೈನಿಕ-ಶಿಕ್ಷಕ”ರನ್ನು ಸಭಾಂಗಣಕ್ಕೆ ಕರೆತಂದು ನಂತರ ವೈಯಕ್ತಿಕ ಹಾಗೂ ಸಂಘ-ಸಂಸ್ಥೆಗಳಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರು, ನಾಗರಿಕ ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಕೆ. ಪ್ರಭಾಕರ ಬಂಗೇರ, ನಿವೃತ್ತ ಯೋಧರು, ಗೌರವ ಸಲಹೆಗಾರರಾದ ಟಿ. ರಾಮ್ ಭಟ್, ಅಶ್ರಫ್ ಚಿಲಿಂಬಿ ಉಪಸ್ಥಿತರಿದ್ದರು.

ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!