September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ್ದ ಮುದ್ದು ಕೃಷ್ಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಸೆ 21 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ವಲಯ ಉಪಾಧ್ಯಕ್ಷ ಸುದರ್ಶನ ಜೈನ್ ಬಂಟ್ವಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ವರ್ಧಮಾನ್ ಶಿಕ್ಷಣ ಸಂಸ್ಥೆಯ ಸಂಚಾಲಕಿ ಶಶಿಕಲಾ ಹೆಗ್ಡೆ, ಹಿರಿಯ ಮುತ್ಸದ್ದಿ ಬೆಳ್ತಂಗಡಿ ತಾಲೂಕು ಜಾನಪದ ಪರಿಷತ್ ಗೌರವಾಧ್ಯಕ್ಷರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯೆ ಆಶಾ ಅಡೂರು, ಮೂಡಬಿದ್ರೆ ಪ್ರಭಾತ್ ಸಿಲ್ಕ್ಸ್ ಅಪೇಕ್ಷಾ ಜೈನ್ ಭಾಗವಹಸಿ ಮಾತಾನಾಡಿದರು.


ವೇದಿಕೆಯಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪ್ರಧಾನ ಸಂಚಾಲಕ ಅಭಿಷೇಕ್ ಬಜಗೋಳಿ, ಅಧ್ಯಕ್ಷೆ ನಿರೀಕ್ಷಿತಾ ಮಂಗಳೂರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮುದ್ದು ಕೃಷ್ಣ ಸ್ಪರ್ಧಾ ವಿಜೇತರಾದ ವೈಭವಲಕ್ಷ್ಮೀ ಪ್ರಥಮ, ಆನ್ಯ ಜೈನ್ ಕಾರ್ಕಳ ತೃತೀಯ, ಶಾನ್ಯ ಕೋಟ್ಯಾನ್ ಮಂಗಳೂರು, ಉತ್ತಮ ಸ್ಥಾನ ಹಾಗೂ ಅತ್ಯುತ್ತಮ ಸ್ಥಾನ ಪಡೆದ ವಿಜೇತರು ಬಹುಮಾನ ಪಡಕೊಂಡಿದ್ದಾರೆ. ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಏರ್ಪಡಿಸಿದ್ದ ಕಥಾ ಸ್ಪರ್ಧಾ ವಿಜೇತರು ಮತ್ತು ಆಮಂತ್ರಣ ಸ್ಟೇಟಸ್ ಸ್ಪೆಷಲ್ 100 ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಲವಾರು ಮುದ್ದು ಮಕ್ಕಳ ಭಾವಚಿತ್ರ ತೆಗೆದು ಬಹುಮಾನ ಗಳಿಸಿಕೊಂಡಿರುವ
ಪೊಟೊಗ್ರಾಫರ್ ಕಾರ್ಕಳ ಗುರು ಸ್ಟುಡಿಯೋ ಮಾಲಕರಾದ ಶರತ್ ಕಾನಂಗಿ ಇವರನ್ನು ವರ್ಧಮಾನ್ ಶಿಕ್ಷಣ ಸಂಸ್ಥೆ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವರ್ಧಮಾನ್ ಸಂಸ್ಥೆಯ ಕುಮಾರ್ ಹೆಗ್ಡೆ, ಪರಿವಾರದ ರಾಕೇಶ್ ಪೊಳಲಿ, ಸದಾನಂದ ಬಿ.ಕುದ್ಯಾಡಿ, ಪ್ರಕಾಶ್ ಆಚಾರ್ಯ , ಪ್ರಕಾಶ್ ಶೆಟ್ಟಿ ಧರ್ಮಸ್ಥಳ, ರಾಜ್ಯ ಸದಸ್ಯರಾದ ಹೆಚ್ಕೆ ನಯನಾಡು ಉಪಸ್ಥಿತರಿದ್ದರು.

ವರ್ಧಮಾನ್ ಸಂಸ್ಥೆಯ ಶಿಕ್ಷಕಿಯರು ಪ್ರಾರ್ಥಿಸಿದರು, ಸಾಹಿತಿ ಶ್ಯಾಮ್ ಭಟ್ ತೆಳ್ಳಾರು ಸ್ವಾಗತಿಸಿದರು, ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರಸ್ತಾವಿಸಿದರು, ನಿರ್ದೇಶಕ ಚೇತನ್ ಕುಮಾರ್ ಅಮೈ ವಿಜೇತರ ಪಟ್ಟಿ ವಾಚಿಸಿದರು, ಧನ್ಯಶ್ರೀ ಬೆಳಾಲು ಕಾರ್ಯಕ್ರಮ ನಿರೂಪಿಸಿದರು, ಕವಿಯಿತ್ರಿ ಮಾಲತಿ ರಮೇಶ್ ಕೆಮ್ಮಣ್ಣು ಧನ್ಯವಾದ ಸಲ್ಲಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ
ಅಪೇಕ್ಷಾ ಜೈನ್ ಹಾಡಿದರು. ಸಪ್ನಾ ಬನ್ನಡ್ಕ ಭರತನಾಟ್ಯ ಮಾಡಿದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
error: Content is protected !!