September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
error: Content is protected !!