ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.22 ರಂದು ಸಂಘದ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷತೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.

2023-24 ನೇ ಸಾಲಿನ ಒಟ್ಟು ವ್ಯವಹಾರ ರೂ. 2,44,03937.12, ಲಾಭ ರೂ. 61,7967.51 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಬೋನಸ್ ನೀಡಲಾಯಿತು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ದ.ಕ ಸಹಾಯಕ ವ್ಯವಸ್ಥಾಪಕರು ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಡಾ. ಗಣಪತಿ ಬಿ. ಎಮ್ ಜಾನುವಾರುಗಳ ಬಗ್ಗೆ ಮಾಹಿತಿ ನೀಡಿದರು . ಸಂಘಕ್ಕೆ ಹೆಚ್ಚು ಹಾಲು ಹಾಕಿದ ಜೊಹರಾಬಿ, ಸುಮಾ ಬಿ ಎಸ್, ಲಕ್ಷ್ಮಿ ಗೌರವಿಸಲಾಯಿತು.
ಎಸ್ ಎಸ್ ಎಲ್ ಸಿ ಮತ್ತು ಪಿಯು ಸಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ವಿದ್ಯಾರ್ಥಿಗಳಿಗೆ ಒಟ್ಟು 6 ಮಂದಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಕ್ರೀಡೆಯಲ್ಲಿ ಸಾಧನೆ ಮಾಡಿದ ಯೂನಿತ್ ಹಾಗೂ ಕರಾಟೆಯಲ್ಲಿ ಸಾಧನೆ ಮಾಡಿದ ಮೊಹಮ್ಮದ್ ಇಲ್ತಿಯಾಜ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ , ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಜಾನಕಿ.ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ದಿಶಾ ಪ್ರಾರ್ಥಸಿ, ಸಂಘದ ನಿರ್ದೇಶಕರಾದ ಜಾನಕಿ ಕಾರ್ಯಕ್ರಮ ನಿರೂಪಿಸಿ, ಚೈತ್ರ ಯ0.ಜಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!