April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.


ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ ಹಕ್ಕು ಪತ್ರ ಲಭಿಸಿರಲಿಲ್ಲ. ಸದ್ರಿ ಸರ್ವೆ ನಂಬರ್ ನಲ್ಲಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕಿಸದ ಕಾರಣದಿಂದಾಗಿ ಹಕ್ಕುಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ 309ಸರ್ವೆ ನಂಬರ್ ನಲ್ಲಿ ಇರುವ ಜಮೀನಿನ ಜಂಟಿ ಸರ್ವೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಕೊಡುವಂತೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಹಕ್ಕುಪತ್ರ ಲಭಿಸಲು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಅರಣ್ಯ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಅಧಿಕಾರಿಗಳು ಸಾಧ್ಯವಾದಷ್ಟು ವೇಗವಾಗಿ ಸರ್ವೆ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ, ಕೇಂದ್ರ ಸಮಿತಿ ಸದಸ್ಯ ಜಾರ್ಜ್, ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷ ಜೈಸನ್ ಪಟ್ಟೇರಿ, ಮುಖಂಡ ಜೋಮೆಟ್ ಕಳೆಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!