ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.


ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ ಹಕ್ಕು ಪತ್ರ ಲಭಿಸಿರಲಿಲ್ಲ. ಸದ್ರಿ ಸರ್ವೆ ನಂಬರ್ ನಲ್ಲಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕಿಸದ ಕಾರಣದಿಂದಾಗಿ ಹಕ್ಕುಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ 309ಸರ್ವೆ ನಂಬರ್ ನಲ್ಲಿ ಇರುವ ಜಮೀನಿನ ಜಂಟಿ ಸರ್ವೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಕೊಡುವಂತೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಹಕ್ಕುಪತ್ರ ಲಭಿಸಲು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಅರಣ್ಯ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಅಧಿಕಾರಿಗಳು ಸಾಧ್ಯವಾದಷ್ಟು ವೇಗವಾಗಿ ಸರ್ವೆ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ, ಕೇಂದ್ರ ಸಮಿತಿ ಸದಸ್ಯ ಜಾರ್ಜ್, ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷ ಜೈಸನ್ ಪಟ್ಟೇರಿ, ಮುಖಂಡ ಜೋಮೆಟ್ ಕಳೆಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya
error: Content is protected !!