25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.


ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ ಹಕ್ಕು ಪತ್ರ ಲಭಿಸಿರಲಿಲ್ಲ. ಸದ್ರಿ ಸರ್ವೆ ನಂಬರ್ ನಲ್ಲಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕಿಸದ ಕಾರಣದಿಂದಾಗಿ ಹಕ್ಕುಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ 309ಸರ್ವೆ ನಂಬರ್ ನಲ್ಲಿ ಇರುವ ಜಮೀನಿನ ಜಂಟಿ ಸರ್ವೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಕೊಡುವಂತೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಹಕ್ಕುಪತ್ರ ಲಭಿಸಲು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಅರಣ್ಯ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಅಧಿಕಾರಿಗಳು ಸಾಧ್ಯವಾದಷ್ಟು ವೇಗವಾಗಿ ಸರ್ವೆ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ, ಕೇಂದ್ರ ಸಮಿತಿ ಸದಸ್ಯ ಜಾರ್ಜ್, ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷ ಜೈಸನ್ ಪಟ್ಟೇರಿ, ಮುಖಂಡ ಜೋಮೆಟ್ ಕಳೆಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!