25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿಗಳಾದ ಪಶು ವೈದ್ಯ ಯತೀಶ್ ರವರು ವಿದ್ಯಾರ್ಥಿಗಳಿಗೆ ರೇಬಿಸ್ ರೋಗ ಹಾಗೂ ಅವುಗಳ ವಿಧಗಳು ,ಕಾಯಿಲೆಯು ಯಾವ ರೀತಿ ಬರುತ್ತದೆ .ನಾಯಿ ಮತ್ತು ಇತರ ಪ್ರಾಣಿಗಳ ಕಚ್ಚುವಿಕೆಯಿಂದ ರೋಗ ಹೇಗೆ ಉಂಟಾಗುತ್ತದೆ, ಪ್ರಾಣಿಗಳಲ್ಲಿ ಯಾವ ರೀತಿ ಕಾಯಿಲೆಯನ್ನು ಪತ್ತೆ ಹಚ್ಚಬಹುದು ಹಾಗೂ ಅದನ್ನು ತಡೆಗಟ್ಟುವಿಕೆ ಮತ್ತು ಅದಕ್ಕೆ ಬೇಕಾದ ಲಸಿಕೆಗಳು ಎಂಬಿತ್ಯಾದಿ ವಿಚಾರಗಳ ಕುರಿತು ಹಲವು ಉದಾಹರಣೆ ಹಾಗೂ ಪಿಪಿಟಿ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ವಿದ್ಯಾರ್ಥಿಗಳ ಪ್ರಶ್ನೋತ್ತರ ಮುಖಾಂತರ ತಮ್ಮ ಸಂದೇಹವನ್ನು ಪರಿಹರಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ ಶಾಲಾ ವಿದ್ಯಾರ್ಥಿನಿ ಕುಮಾರಿ ಕಲ್ಪಿತ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya
error: Content is protected !!