23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಬೆಳ್ತಂಗಡಿ (ಸೆ-24): ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್
ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು.

ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ, ಉದಯನಗರ, ಸುದೆ ಮುಗೇರು, ಸಂತೆಕಟ್ಟೆ, ರೆಂಕೆದಗುತ್ತು, ಮುಗುಳಿ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ವಯೋವೃದ್ಧರು, ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಬೀದಿ ನಾಯಿಗಳ ಉಪಟಳ ಹೇಳ ತೀರದು. ಅದರಲ್ಲೂ ಬೈಕ್ ಸವಾರರನ್ನು ಈ ನಾಯಿಗಳು ಅಟ್ಟಿಸಿಕೊಂಡು ಹೋಗಿ ಭಯ ಹುಟ್ಟಿಸುವುದಲ್ಲದೆ ಕಚ್ಚುತ್ತವೆ. ಭಯಗೊಂಡ ಅನೇಕರು ಅಪಘಾತಕ್ಕೂ ಒಳಗಾಗಿದ್ದಾರೆ.

ಪ್ರತಿ ವರ್ಷ ಪಂಚಾಯತ್ ವತಿಯಿಂದಲೇ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಚಿಕಿತ್ಸೆ ಮಾಡದಿರುವುದರಿಂದ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಮಕ್ಕಳಿಗೂ ಬೀದಿನಾಯಿ ಕಚ್ಚಿವೆ. ಆದ್ದರಿಂದ ಪಂಚಾಯತ್ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರ ಪ್ರಾಣ ರಕ್ಷಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸಫ್ರಾ, ಮುಮ್ತಾಝ್, ರುಬಿಯಾ, ಸಫೀದಾ ಉಪಸ್ಥಿತರಿದ್ದರು.

Related posts

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!