September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಒತ್ತಾಯಿಸಿದ್ದಾರೆ.

ತಪ್ಪು ಯಾರು ಮಾಡಿದ್ದರು ಶಿಕ್ಷೆ ಅನುಭವಿಸಲೇ ಬೇಕು. ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಇಂದಿನ ಹೈಕೋರ್ಟ್‌ ತೀರ್ಪಿನಿಂದ ಬಯಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಅಕ್ರಮ ಎಸಗಿರುವುದಕ್ಕೆ ಹೈಕೋಟ್‌ ನೀಡಿರುವ ಈ ತೀರ್ಪಿಗಿಂತ ದೊಡ್ಡ ಸಾಕ್ಷ್ಯ ಬೇರೆ ಬೇಕಿಲ್ಲ. ಹೀಗಾಗಿ, ಸಿಎಂ ಸ್ಥಾನದಲ್ಲಿ ಮುಂದವರಿಯುವುದಕ್ಕೆ ಸಿದ್ದರಾಮಯ್ಯನವರಿಗೆ ಇನ್ನು ಯಾವುದೇ ನೈತಿಕತೆಯಿಲ್ಲ.

ಕರ್ನಾಟಕದ ಮುಖ್ಯಮಂತ್ರಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಹಾಗೂ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!