April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿಯ ನವೋದಯ ಸಭಾ ಭವನದಲ್ಲಿ ಸೆ.24 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ರೂ.172 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ 87 ಲಕ್ಷ ಲಾಭ ಗಳಿಸಿದೆ, ಸದಸ್ಯರಿಗೆ ಶೇ.4% ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ತಿಳಿಸಿದರು.

ವರದಿ ವರ್ಷದಲ್ಲಿ ಸಂಘದ ಪ್ರಧಾನ ಕಚೇರಿಯಲ್ಲಿ ರೂ.169.42ಕೋಟಿ ವಾರ್ಷಿಕ ವ್ಯವಹಾರ ಹಾಗೂ ನಡಿಬೆಟ್ಟು ಶಾಖೆಯಲ್ಲಿ ರೂ.90.77ಲಕ್ಷ ವ್ಯವಹಾರ ಮಾಡಲಾಗಿದೆ ಎಂದರು.
ಸಂಘದ ಪ್ರಗತಿಗೆ ರೈತ ಸದಸ್ಯರು ಚರ್ಚಿಸಿದರು.

ವೇದಿಕೆಯಲ್ಲಿ ನಿರ್ದೇಶಕ ಕೆ. ನಾರಾಯಣ ರಾವ್,ಆನಂದ ಸಾಲಿಯಾನ್, ಸುಮಿತ್ರ ಬಿ ಹೆಗ್ಡೆ, ಮಲ್ಲಿಕಾ ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್, ಶೀನಪ್ಪ ಎಂ, ಸುಧೀರ್, ಪಿ.ಯಚ್ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಆಡಳಿತ ವರದಿ ಮಂಡಿಸಿದರು. ಸಿಬ್ಬಂದಿ ಶಶಿಕಲಾ ಪ್ರಾರ್ಥನೆ ಹಾಡಿದರು.ನಾರಾಯಣ ರಾವ್ ಸ್ವಾಗತಿಸಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರನಾಥ ಗೌಡ, ನಿರ್ದೇಶಕಿ ಸುಶೀಲಾ ಹಾಗೂ ಮಾಜಿ ಅಧ್ಯಕ್ಷರು, ರೈತ ಸದಸ್ಯರು ಉಪಸ್ಥಿತರಿದ್ದರು. ಸಹ ವ್ಯವಸ್ಥಾಪಕ ಎನ್.ಪ್ರಭಾಕರ, ಶಾಖಾ ವ್ಯವಸ್ಥಾಪಕ ರಮೇಶ್,ಲೆಕ್ಕಿಗ ರಾಜೇಶ್ ಎನ್, ಗುಮಾಸ್ತ ಮೋಹನ ಗೌಡ, ಜವಾನ ಶುಭಕರ ಸಹಕರಿಸಿದರು.

Related posts

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya
error: Content is protected !!