July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿಯ ನವೋದಯ ಸಭಾ ಭವನದಲ್ಲಿ ಸೆ.24 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ರೂ.172 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ 87 ಲಕ್ಷ ಲಾಭ ಗಳಿಸಿದೆ, ಸದಸ್ಯರಿಗೆ ಶೇ.4% ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ತಿಳಿಸಿದರು.

ವರದಿ ವರ್ಷದಲ್ಲಿ ಸಂಘದ ಪ್ರಧಾನ ಕಚೇರಿಯಲ್ಲಿ ರೂ.169.42ಕೋಟಿ ವಾರ್ಷಿಕ ವ್ಯವಹಾರ ಹಾಗೂ ನಡಿಬೆಟ್ಟು ಶಾಖೆಯಲ್ಲಿ ರೂ.90.77ಲಕ್ಷ ವ್ಯವಹಾರ ಮಾಡಲಾಗಿದೆ ಎಂದರು.
ಸಂಘದ ಪ್ರಗತಿಗೆ ರೈತ ಸದಸ್ಯರು ಚರ್ಚಿಸಿದರು.

ವೇದಿಕೆಯಲ್ಲಿ ನಿರ್ದೇಶಕ ಕೆ. ನಾರಾಯಣ ರಾವ್,ಆನಂದ ಸಾಲಿಯಾನ್, ಸುಮಿತ್ರ ಬಿ ಹೆಗ್ಡೆ, ಮಲ್ಲಿಕಾ ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್, ಶೀನಪ್ಪ ಎಂ, ಸುಧೀರ್, ಪಿ.ಯಚ್ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಆಡಳಿತ ವರದಿ ಮಂಡಿಸಿದರು. ಸಿಬ್ಬಂದಿ ಶಶಿಕಲಾ ಪ್ರಾರ್ಥನೆ ಹಾಡಿದರು.ನಾರಾಯಣ ರಾವ್ ಸ್ವಾಗತಿಸಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರನಾಥ ಗೌಡ, ನಿರ್ದೇಶಕಿ ಸುಶೀಲಾ ಹಾಗೂ ಮಾಜಿ ಅಧ್ಯಕ್ಷರು, ರೈತ ಸದಸ್ಯರು ಉಪಸ್ಥಿತರಿದ್ದರು. ಸಹ ವ್ಯವಸ್ಥಾಪಕ ಎನ್.ಪ್ರಭಾಕರ, ಶಾಖಾ ವ್ಯವಸ್ಥಾಪಕ ರಮೇಶ್,ಲೆಕ್ಕಿಗ ರಾಜೇಶ್ ಎನ್, ಗುಮಾಸ್ತ ಮೋಹನ ಗೌಡ, ಜವಾನ ಶುಭಕರ ಸಹಕರಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya
error: Content is protected !!