July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಕಾಶಿಪಟ್ಣ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2023-24ನೇ ಸಾಲಿನ ಪ್ರತಿಷ್ಠಿತ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ತಾತ್ಕಾಲಿಕ ಪಟ್ಟಿಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತು ಆಯ್ಕೆಯಾಗಿದೆ.

ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಅ.೨ ಗಾಂಧಿ ಜಯಂತಿಯಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ನಗದು ಬಹುಮಾನವನ್ನು ಒಳಗೊಂಡಿರುತ್ತದೆ.


ಕಾಶಿಪಟ್ಣ ಗ್ರಾಮ ಪಂಚಾಯತು ತಾಲೂಕಿನ ಉತ್ತಮ ಗ್ರಾಮ ಪಂಚಾಯತುಗಳಲ್ಲಿ ಒಂದಾಗಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪಂಚಾಯತು ವ್ಯಾಪ್ತಿಯ ತ್ಯಾಜ್ಯ ನಿರ್ಮೂಲನೆಗೆ ಆದ್ಯತೆ ನೀಡಿ, ಪಂಚಾಯತು ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ.


ಗ್ರಾಮದಲ್ಲಿ ರಸ್ತೆ ಸೇರಿದಂತೆ ಅನೇಕ ಕಾಮಗಾರಿ ನಿರ್ವಹಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಪಂಚಾಯತು ವತಿಯಿಂದ ನಡೆದ ಅಭಿವೃದ್ಧಿ ಕಾರ್ಯಗಳು, ಚುನಾಯಿತ ಆಡಳಿತ ಮಂಡಳಿಯ ಉತ್ತಮ ಆಡಳಿತ, ಪಿಡಿಒ ಮತ್ತು ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ಕಾಶಿಪಟ್ನ ಗ್ರಾಮ ಪಂಚಾಯತು ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

Related posts

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya
error: Content is protected !!