22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಕಾಶಿಪಟ್ಣ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2023-24ನೇ ಸಾಲಿನ ಪ್ರತಿಷ್ಠಿತ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ತಾತ್ಕಾಲಿಕ ಪಟ್ಟಿಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತು ಆಯ್ಕೆಯಾಗಿದೆ.

ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಅ.೨ ಗಾಂಧಿ ಜಯಂತಿಯಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ನಗದು ಬಹುಮಾನವನ್ನು ಒಳಗೊಂಡಿರುತ್ತದೆ.


ಕಾಶಿಪಟ್ಣ ಗ್ರಾಮ ಪಂಚಾಯತು ತಾಲೂಕಿನ ಉತ್ತಮ ಗ್ರಾಮ ಪಂಚಾಯತುಗಳಲ್ಲಿ ಒಂದಾಗಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪಂಚಾಯತು ವ್ಯಾಪ್ತಿಯ ತ್ಯಾಜ್ಯ ನಿರ್ಮೂಲನೆಗೆ ಆದ್ಯತೆ ನೀಡಿ, ಪಂಚಾಯತು ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ.


ಗ್ರಾಮದಲ್ಲಿ ರಸ್ತೆ ಸೇರಿದಂತೆ ಅನೇಕ ಕಾಮಗಾರಿ ನಿರ್ವಹಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಪಂಚಾಯತು ವತಿಯಿಂದ ನಡೆದ ಅಭಿವೃದ್ಧಿ ಕಾರ್ಯಗಳು, ಚುನಾಯಿತ ಆಡಳಿತ ಮಂಡಳಿಯ ಉತ್ತಮ ಆಡಳಿತ, ಪಿಡಿಒ ಮತ್ತು ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ಕಾಶಿಪಟ್ನ ಗ್ರಾಮ ಪಂಚಾಯತು ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

Related posts

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya
error: Content is protected !!