September 6, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya
error: Content is protected !!