25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

ಬೆಳ್ತಂಗಡಿ: ಬೇಸಿಗೆ ಮತ್ತು ಮಳೆಗಾಲದ ಅವಧಿಯಲ್ಲಿ ಕರುಳು ಬೇನೆ/ಕಾಲರಾ ಪ್ರಕರಣಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ವಿನಂತಿಸಲಾಗಿದೆ.

-ಕುಡಿಯಲು ಶುದ್ಧವಾದ ನೀರನ್ನು ಉಪಯೋಗಿಸಬೇಕು. ಅಂದರೆ ನಳ್ಳಿ ಬೋರ್‌ವೆಲ್‌ಗಳು ಕ್ರಿಮಿನಾಶಕ ಸಿಂಪಡಿಸಿದ ನೀರನ್ನು ಕ್ಲೋರಿನೇಟ್ ಮಾಡಿ ಉಪಯೋಗಿಸಬೇಕು. ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಇನ್ನೂ ಕ್ಷೇಮ
– ಮಲ ಮೂತ್ರ ವಿಸರ್ಜನೆಗೆ ಶೌಚಾಲಯ ಬಳಸತಕ್ಕದ್ದು. ಬಯಲು ಶೌಚಾಲಯವನ್ನು ಸಂಪೂರ್ಣ ತಪ್ಪಿಸತಕ್ಕದ್ದು.
– ಯಾವಾಗಲೂ ಬಿಸಿಯಾದ ಆಹಾರ ಪದಾರ್ಥಗಳನ್ನು ಸೇವಿಸಬೇಕು.
– ಸಾರ್ವಜನಿಕ ಸ್ಥಳಗಳಲ್ಲಿ ತೆರೆದಿಟ್ಟ ತಿಂಡಿ ತಿನಿಸು, ಪಾನೀಯ ಹಾಗೂ ಕತ್ತರಿಸಿದ ಹಣ್ಣು ಹಂಪಲುಗಳನ್ನು ತಿನ್ನಬಾರದು.
– ಬೀದಿಯಲ್ಲಿ ಮರಾಟ ಮಾಡುವ ಐಸ್ ಕ್ಯಾಂಡಿ ಮತ್ತು ಐಸ್ ಕ್ರೀಮ್‌ಗಳನ್ನು ಮಕ್ಕಳಿಗೆ ಕೊಡಿಸಬಾರದು.
– ಧೂಳು ಮತ್ತು ನೊಣಗಳಿಂದ ರಕ್ಷಿಸಲು ಎಲ್ಲಾ ಆಹಾರ ಮತ್ತು ಕುಡಿಯುವ ನೀರನ್ನು ಮುಚ್ಚಿಡುವುದು. ಹಣ್ಣು ಹಂಪಲು ಉಪಯೋಗಿಸುವ ಮುನ್ನ ತೊಳಿಯುವುದು. ಆಹಾರ ಪದಾರ್ಥಗಳು ಕೆಡುವ ಮುನ್ನ ವಿಲೇವಾರಿ ಮಾಡತಕ್ಕದ್ದು.
– ಕಾಲರಾ/ಕರುಳುಬೇನೆ/ಅತಿಸಾರ ಭೇದಿ ಕಂಡು ಬಂದಲ್ಲಿ ರೋಗಿಗೆ ಹೆಚ್ಚು ದ್ರವರೂಪದ ಆಹಾರ ಪದಾರ್ಥಗಳಾದ ಗಂಜಿ ನೀರು, ಹಾಲು, ಎಳನೀರು ಹಾಗೂ ಆರೋಗ್ಯ ಕಾರ್ಯಕರ್ತರಲ್ಲಿ ದೊರೆಯುವ ಪುನರ್ಜಲೀಕರಣ ದ್ರಾವಣಗಳನ್ನು ನೀಡುತ್ತಾ ತಕ್ಷಣವೇ ವೈದ್ಯರನ್ನು ಭೇಟಿ ಮಾಡುವುದು.
– ಕರುಳು ಬೇನೆ/ಕಾಲರಾ ವಿರುದ್ಧ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವ ಚಿಕಿತ್ಸೆಯನ್ನು ಪಡೆಯುವುದು.
– ಹೋಟೇಲು, ಕ್ಯಾಂಟಿನ್ ಇತ್ಯಾದಿಗಳಲ್ಲಿ ಕುಡಿಯಲು ಬಿಸಿನೀರು ಹಾಗೂ ಬಿಸಿ ಆಹಾರವನ್ನು ಕೇಳಿ ಪಡೆಯುವುದು.
– ತಮ್ಮ ಸುತ್ತಮುತ್ತಲಿನ ಪರಿಸರ ನೈರ್ಮಲ್ಯವನ್ನು ಕಾಪಾಡುವುದು.

ಈ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!