30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

ಉಜಿರೆ, ಸೆ. 23: ಸಂಸದೀಯ ವ್ಯವಹಾರಗಳ ಇಲಾಖೆ ಕರ್ನಾಟಕ ಸರಕಾರ, ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಪಪೂ. ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಗಳಾದ ಕಾರ್ತಿಕ್ ಡಿ. ಸಿ. ಹಾಗೂ ಹಸೀನಾ ಕೆ. ಅವರು ‘ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ’ ಪಡೆದುಕೊಂಡಿದ್ದಾರೆ.


ಮಂಗಳೂರಿನ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನಲ್ಲಿ ಸೆ. 20 ರoದು ಸ್ಪರ್ಧೆ ನಡೆಯಿತು. ದ ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸಿ ಜಯಣ್ಣ ಪ್ರಶಸ್ತಿ ವಿತರಿಸಿದರು.


ಬಹುಮಾನ ವಿಜೇತರನ್ನು ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯಾ ಕುಮಾರಿ ತರಬೇತಿ ನೀಡಿದ್ದರು. 

Related posts

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya
error: Content is protected !!