25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಕಾಶಿಪಟ್ಣ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2023-24ನೇ ಸಾಲಿನ ಪ್ರತಿಷ್ಠಿತ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ತಾತ್ಕಾಲಿಕ ಪಟ್ಟಿಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತು ಆಯ್ಕೆಯಾಗಿದೆ.

ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಅ.೨ ಗಾಂಧಿ ಜಯಂತಿಯಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ನಗದು ಬಹುಮಾನವನ್ನು ಒಳಗೊಂಡಿರುತ್ತದೆ.


ಕಾಶಿಪಟ್ಣ ಗ್ರಾಮ ಪಂಚಾಯತು ತಾಲೂಕಿನ ಉತ್ತಮ ಗ್ರಾಮ ಪಂಚಾಯತುಗಳಲ್ಲಿ ಒಂದಾಗಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪಂಚಾಯತು ವ್ಯಾಪ್ತಿಯ ತ್ಯಾಜ್ಯ ನಿರ್ಮೂಲನೆಗೆ ಆದ್ಯತೆ ನೀಡಿ, ಪಂಚಾಯತು ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ.


ಗ್ರಾಮದಲ್ಲಿ ರಸ್ತೆ ಸೇರಿದಂತೆ ಅನೇಕ ಕಾಮಗಾರಿ ನಿರ್ವಹಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಪಂಚಾಯತು ವತಿಯಿಂದ ನಡೆದ ಅಭಿವೃದ್ಧಿ ಕಾರ್ಯಗಳು, ಚುನಾಯಿತ ಆಡಳಿತ ಮಂಡಳಿಯ ಉತ್ತಮ ಆಡಳಿತ, ಪಿಡಿಒ ಮತ್ತು ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ಕಾಶಿಪಟ್ನ ಗ್ರಾಮ ಪಂಚಾಯತು ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

Related posts

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya
error: Content is protected !!