22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya
error: Content is protected !!